ಭಾರತ ಅಥವಾ ಭಾರತೀಯತೆಯ ಬಗ್ಗೆ ಮಾತನಾಡುವಾಗ ಯಾರಿಗೆ ಆಗಲಿ ಆತ್ಮದೊಳಗಿನಿಂದ ಉತ್ಸಾಹ ಭಾವಕತೆ, ದೇಶಾಭಿಮಾನದ ಜ್ವಾಜ್ವಲ್ಯ ಮೂಡಿ ಬರುತ್ತದೆ. ಯಾಕೆಂದರೆ, ಭಾರತದಲ್ಲಿ ಅನೇಕ ಭಾರತಗಳಿವೆ. ನೂರಕ್ಕೂ ಹೆಚ್ಚು ಭಾಷೆಗಳು ಹತ್ತಕ್ಕೂ ಪ್ರಮುಖ ಹಾಗೂ ಅನೇಕ ಅಪ್ರಮುಖ ಲಿಪಿ ವ್ಯವಸ್ಥೆಗಳು ಅಸಂಖ್ಯಾತ ಕುಲ, ಪಂಗಡಗಳಿಂದೊಡಗೂಡಿದ ಅನೇಕ ಪ್ರಾಚೀನ ಮತ ಧರ್ಮಗಳು, ಸಾವಿರಾರು ವರ್ಷಗಳಲ್ಲಿ ನಡೆದಿರುವ ವರ್ಣಸಂಕರಗಳು, ಬಗೆ ಬಗೆಯ ಭೂಪ್ರದೇಶಗಳು, ನಾನಾ ತೆರನಾದ ಹವಾ ಗುಣಗಳು ಇವೇ ಮುಂತಾದವುಗಳಿಂದಾಗಿ ಪರಂಪರೆ ಹಾಗೂ ವಿರುದ್ಧ ಪರಂಪರೆಗಳ ಅತ್ಯಂತ ಸಂಕೀರ್ಣವಾದ ಜಾಲ ನಿರ್ಮಾಣವಾಗಿದೆ. ಇನ್ನೊಂದು ವಿಷ್ಯ ಏನಪ್ಪ ಅಂದ್ರೆ ನೀವು ಭಾರತದ ಬಗೆಗೆ ಇದು ಸತ್ಯ ಎಂದು ಎನನ್ನೇ ಹೇಳಿದರೂ, ಅದಕ್ಕೆ ತೀರ ವಿರುದ್ಧವಾದುದನ್ನು ಸತ್ಯದ ತಲೆಯ ಮೇಲೆ ಹೊಡೆದಂತೆ ಕೂಡ ಹೇಳಬಹುದು.
1757 ರಿಂದ ಭಾರತವನ್ನು ಬ್ರಿಟೀಷರು ಆಕ್ರಮಿಸಿಕೊಳ್ಳುತ್ತಾ ಬಂದಾಗ ಸಾಮಾನ್ಯ ಜನರಲ್ಲಿ ಉಂಟಾದ ಪ್ರತ್ರಿಕ್ರೀಯೇನು ಎಂಬುದನ್ನು ನಾವು ಅರಿತುಕೊಳ್ಳಬೇಕು ಮತ್ತು ನಮ್ಮ ಜನ ಆಗಲೇ ಪ್ರತಿಕ್ರಿಯಿಸಿದ್ದರೆ ಬ್ರಿಟೀಷರ ಸ್ಥಿತಿ ಏನಾಗುತ್ತಿತ್ತು ಎಂಬುದನ್ನು ತಿಳಿದರೆ ನಿಮಗೆ ಆಶ್ಚರ್ಯವಾಗದೇ ಇರದು. ಪ್ಲಾಸಿ ಕದನವನ್ನು ರಾಬರ್ಟ್ಕ್ಲೈವ್ನ ನಾಯಕತ್ವದಲ್ಲಿ ಬ್ರಿಟಿಷರು ಗೆದ್ದರೇನೋ ನಿಜ. ಆದರೆ ಆ ನಂತರ ಅವನು 200 ಇಂಗ್ಲೀಷ್ ಸೈನಿಕರು ಹಾಗೂ 500 ಭಾರತೀಯ ಸಿಪಾಯಿ ದಳಗಳೊಂದಿಗೆ ಬಂಗಾಳದ ರಾಜಧಾನಿಯಾಗಿದ್ದ ಮುರ್ಷಿದಾ ಬಾದಿನಲ್ಲಿ ಒಂದು ವಿಜಯೋತ್ಸವ ನಡೆಸಿದ್ದ. ಸಹಸ್ರಾರು ಪ್ರಜೆಗಳು ಆ ಮೆರವಣಿಗೆಯನ್ನು ನೋಡಿದ್ದರು. ಅದನ್ನು ಕುರಿತು ಕ್ಲೈವ್ ಪಾರ್ಲಿಮೆಂಟರಿ ಸಮಿತಿಗೆ ವರದಿ ನೀಡುವಾಗ, ಮೆರವಣಿಗೆಯ ಸಂಧರ್ಭದಲ್ಲಿ ಲಕ್ಷಾಂತರ ಮಂದಿ ಭಾರತೀಯರು ಕೂಡಿದ್ದು, ಅವರು ಮನಸ್ಸು ಮಾಡಿದ್ದರೆ ಕಲ್ಲು, ದೊಣ್ಣೆಗಳಿಂದಲೇ ಯುರೋಪಿಯನ್ನರನ್ನು ನಾಶ ಮಾಡಬಹುದಾಗಿತ್ತು ಎಂದಿದ್ದನಂತೆ. ಅವನಾಡಿದ ಅಂದಿನ ಆ ಮಾತಿನಿಂದಲೇ ತಿಳಿಯುತ್ತದೆ ನಮ್ಮ ಭಾರತೀಯರು ಎಷ್ಟು ಪರಾಕ್ರಮಿಗಳು ಜೊತೆಗೆ ಎಷ್ಟು ಮುಗ್ಧರು ಎಂದು. ನಮ್ಮ ಅಂದಿನ ಮುಗ್ಧತೆಯನ್ನು ಬ್ರಿಟೀಷರು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು 18ನೇ ಶತಮಾನದ ಮಧ್ಯಭಾಗದಲ್ಲಿ ಸಮೃದ್ಧ ದೇಶವೆಂದು ಖ್ಯಾತಿ ಪಡೆದಿದ್ದ ಭಾರತವನ್ನು 19ನೇಯ ಶತಮಾನದ ಕೊನೆಯ ವೇಳೆಗೆ ಜಗತ್ತಿನ ಅತ್ಯಂತ ಧೀನ ಧರಿದ್ರ ದೇಶ ಎಂಬ ಸ್ಧಿತಿಗೆ ತಂದರು. ಆದರೆ ಭಾರತ ಎಂದೂ ತನ್ನ ಅಸ್ಧಿತ್ವವಾಗಲಿ, ಹಿರಿಮೆಯಾಗಲಿ, ತನ್ನತನವನ್ನಾಗಲಿ ಕಳೆದುಕೊಳ್ಳಲಿಲ್ಲ. ಅದು ಕಣ್ರೀ ನಮ್ಮ ಭಾರತದ ಅಂತಸ್ತು.
ಆಗತಾನೆ ಇಂಗ್ಲೆಂಡಿನಲ್ಲಿ ನಡೆದ ಔಧ್ಯಮಿಕ ಕ್ರಾಂತಿಯು ಭಾರತಕ್ಕೆ ‘ಹಳ್ಳಕ್ಕೆ ಬಿದ್ದವನ ಮೇಲೆ ಬಂಡೆ ಎಳೆದಂತೆ’ ಮಾಡಿತ್ತು. ಇದರ ಸರಿದೂಗುವಿಕೆಗೆ ಭಾರತದ ಪಾತ್ರ ಎಷ್ಟು ಆಳವಾಗಿತ್ತೆಂದು ಆಲೋಚಿಸಿದರೆ ತಲೆ ಕೆಡುತ್ತದೆ. ಯಾಕೆಂದರೆ ನಮ್ಮಲ್ಲಿಯ ಈಸ್ಟ್ ಇಂಡಿಯಾ ಕಂಪೆನಿಯ ವ್ಯಾಪಾರ ಇಂಗ್ಲೆಂಡಿಗೆ ಹಣದ ಹೊಳೆ ಹರಿಸಿ ಬೃಹತ್ ಉದ್ಯಮಗಳು ತಲೆ ಎತ್ತಲು ಅಗತ್ಯವಾದ ಬಂಡವಾಳವನ್ನು ಓದಗಿಸಿತ್ತು. ಹತ್ತಿ ಉದ್ಯಮ, ಸಣ್ಣ ಕೈಗಾರಿಕೆಯ ಇತರ ಉದ್ಯಮ ಇತ್ಯಾದಿಗಳಿಂದಲೇ ಇಂಗ್ಲೆಂಡಿಗೆ ದುಡ್ಡಿನ ಸುರಿಮಳೆಗಳೇ ಬರುತ್ತಿದ್ದವು ಹೊರತು, ಅವರು ಮಾಡಿದ ಕ್ರಾಂತಿಯಿಂದಲ್ಲ ಅದು ನಮ್ಮ ಭಾರತದ ಕೌಶಲ್ಯತೆ.
ಅದು 1919 ಏಪ್ರಿಲ್ 11. ಆ ಸಂಧರ್ಭ ಡಯರ್ ಎಂಬ ಸೇನಾಧಿಕಾರಿಯನ್ನು ಭಾರತಕ್ಕೆ ಕರೆಸಿ ಮಾರ್ಷಲ್ ಲಾ ಜಾರಿ ಮಾಡಲಾಗಿತ್ತು. ಏಪ್ರಿಲ್ 13 ರಂದು ಜಲಿಯನ್ ವಾಲಾಬಾಗ್ನಲ್ಲಿ ಒಂದು ಜಾತ್ರೆಗಾಗಿ ಜನ ಕೂಡಿದ್ದರು. ಬಹುತೇಕ ಜನ ಹಳ್ಳಿಗರಾಗಿದ್ದು, ಅವರಿಗೆ ಬ್ರಟಿಷ್ ನಾಯಿಗಳ ಪ್ರತಿ ಬಂಧಕ ವಿಚಾರವೇ ತಿಳಿದಿರಲಿಲ್ಲ. ಆ ಮೈದಾನಕ್ಕೆ ಸುತ್ತಲೂ ಗೋಡೆ ಇದ್ದು ಒಂದೇ ಒಂದು ಧ್ವಾರ ಇತ್ತು. ಡಯರ್ ತಾನೇ ಮುಂದೆ ನಿಂತು ನಿಶ್ಯಸ್ತ್ರ ಗುಂಪಿನ ಮೇಲೆ ಯಾವ ಮುನ್ನಚ್ಚರಿಕೆಯನ್ನು ನೀಡದೆ ಗುಂಡಿನ ಮಳೆಗೆರೆದಿದ್ದ. ಆ ದಿನ ಅಲ್ಲಿ ಸತ್ತವರ ಸಂಖ್ಯೆ 379 ಎಂದು ಸರ್ಕಾರವೇ ತಿಳಿಸಿತ್ತು. ಇದಾದ ಬಳಿಕ ಮಾತನಾಡಿದ್ದ ಡಯರ್ ಈ ಅಮಾನುಷ ಕೃತ್ಯಕ್ಕೆ ಗುಂಡುಗಳು ಸಾಲದಾದವು, ಗಲ್ಲಿಗಳು ಕಿರಿದಾದವು, ಕಾರಣ ಅರ್ಮರ್ಡ ಕಾರುಗಳನ್ನು ತರಲಾಗಲಿಲ್ಲವೆಂದು ವಿಷಾದ ವ್ಯಕ್ತಪಡಿಸಿದ್ದ. ಇದರಿಂದಲೇ ತಿಳಿಯುತ್ತದೆ ನಿಶ್ಯಸ್ತ್ರಧಾರಿಗಳಾದ ನಮ್ಮನ್ನು ಕೊಲ್ಲಲು ಅವನಿಗೆ ಅಷ್ಟು ಗಂಡುಗಳು ಸಾಲಲಿಲ್ಲ. ಇನ್ನು ನಾವು ಅವರಂತೆ ಶಸ್ತ್ರಧಾರಿಗಳಾಗಿದ್ದರೆ ನಮ್ಮ ಮೈಯನ್ನೇ ಅವರಿಗೆ ಮುಟ್ಟಲಾಗುತ್ತಿರಲಿಲ್ಲವೇನೋ ಅಲ್ಲವೇ...
17 ಮತ್ತು 18ನೇಯ ಶತಮಾನಗಳಲ್ಲಿ ಭಾರತ ಸಂಪದ್ಭರಿತ ದೇಶವಾಗಿತ್ತು ಎಂದು ಹೇಳಿದರೆ ಅದನ್ನು ನಂಬುವುದು ಕಷ್ಟ ಆದರೂ ಈ ಮಾತು ಅಕ್ಷರಶಃ ನಿಜ ಈ ಅಭಿಪ್ರಾಯವನ್ನು ಸ್ಫಷ್ಟ ಪಡಿಸಲು ಎರಡು ಮೂರು ಉಲ್ಲೇಖಗಳಿವೆ ನನ್ನ ಬಳಿ. ಹೇಳ್ತೀನಿ. ಓದಿದ ನಂತರ ನಮ್ಮ ದೇಶಕ್ಕೆ ಯಾವ ದೇಶವೂ ಸಾಟಿ ಆಗಲಾರದು ಬಿಡಿ ಎಂದು ನಿಮಗೆ ಅನಿಸಬಹುದು. ಇಲ್ಲಿನ ಅಂಕಿ ಅಂಶಗಳನ್ನು ಗಮನಿಸಿದರೆ ಆಗಲೇ ಅಷ್ಟಿದ್ದ ಶ್ರೀಮಂತಿಕೆ ಇಂದಿದ್ದರೆ ಎಷ್ಟು ಕೋಟಿ ಆಗುತ್ತಿತ್ತೋ ಎಂದು ನಿಬ್ಬೆರಗಾಗಬಹುದು.
• ಪಿಯರ್ ಸೆನ್ ಎಂಬಾತ 1572ರಲ್ಲಿ ಭಾರತದ ಸಮುದ್ರ ವ್ಯಾಪಾರ 8 ಕೋಟಿ ರೂಪಾಯಿಗಳಷ್ಟು ಎಂದು ಅಂದಾಜು ಮಾಡಿ ಹೇಳಿದ್ದ. (ಗಮನಿಸಬೇಕು ನೀವು ಇದು ಸಾವಿರ ಅಲ್ಲ ಲಕ್ಷ ಅಲ್ಲ ಬದಲಾಗಿ ಕೋಟಿ)
• ಬ್ರಿಟೀಷರು ಭಾರತಕ್ಕೆ ಬರುವ ಮುಂಚಿನ ಮಾತು ಇದು 1601 ರಿಂದ 1623ರವರೆಗೆ ಈಸ್ಟ್ ಇಂಡಿಯಾ ಕಂಪನಿಯು ಭಾರತಕ್ಕೆ ತಂದ ವಸ್ತುಗಳಲ್ಲಿ ಶೇ 68.2 ಪಾಲು ಚಿನ್ನ ಬೆಳ್ಳಿ ಯಾಗಿತ್ತಂತೆ.
• ಆಗ ಭಾರತಕ್ಕೆ ವಿನಿಮಯವಾಗಿ ಕಳುಹಿಸಲು ಯೋಗ್ಯವಾದ ವಸ್ತುಗಳು ಬ್ರಿಟನ್ನಲ್ಲಿ ತಾಯಾರಾಗುತ್ತಿರಲಿಲ್ಲ ಹಾಕ್ಸಿನ್ ಎಂಬಾತ ಎಲ್ಲ ರಾಷ್ಟ್ರಗಳು ಇಲ್ಲಿಗೆ ನಾಣ್ಯ (ಚಿನ್ನ,ಬೆಳ್ಳಿ) ತಂದು ಸರಕುಗಳನ್ನು ಒಯ್ಯುತ್ತವÉ. ಎಂದು ತನ್ನ ಪ್ರವಾಸ ಕಥನದಲ್ಲಿ ತಿಳಿಸಿದ್ದಾನೆ.
• ಈಸ್ಟ್ ಇಂಡಿಯಾ ಕಂಪೆನಿ ತನ್ನ ವ್ಯಾಪಾರ ಕುದುರಿಸಿಕೊಂಡ ನಂತರವೂ 1710-1759 ರ ಅರ್ಧ ಶತಮಾನದ ಅವಧಿಯಲ್ಲಿ ಇಂಗ್ಲೆಂಡು ಪೂರ್ವ ದೇಶಗಳೊಂದಿಗೆ ಮಾಡಿದ ರಪ್ತು ವ್ಯಾಪಾರದ ಒಟ್ಟು 3 ಕೋಟಿ 60 ಲಕ್ಷ ಪೌಂಡು ಆಗಿತ್ತಂತೆ. ಅವುಗಳಲ್ಲಿ 92 ಲಕ್ಷ ಮಾತ್ರ ಸರಕು ರೂಪದಲ್ಲಿ ಉಳಿದ 2 ಕೋಟಿ 68 ಲಕ್ಷ ಚಿನ್ನ, ಬೆಳ್ಳಿ, ರೂಪದಲ್ಲಿ ಇದ್ದವಂತೆ.
ನೋಡಿ ನಾವೆಷ್ಟು ಶ್ರೀಮಂತರಲ್ವಾ...ಎಂಥಹ ಅರ್ಥವ್ಯವಸ್ಥೆ ನಮ್ಮದಲ್ವಾ...!!!
ಈ ಅಂಕಿ ಸಂಖ್ಯೆಗಳ ಅರ್ಥ ಇಷ್ಟು. ಭಾರತ 18ನೇಯ ಶತಮಾನದ ನಡು ಭಾಗದವರೆಗೆ ಸಿದ್ಧ ವಸ್ತುಗಳನ್ನು ರಫ್ತು ಮಾಡಿ ಸಂಪತ್ತನ್ನು ಗಳಿಸುತ್ತಿತ್ತು. ಹಲವಾರು ಆಕ್ರಮಣಗಳು, ಯುದ್ಧಗಳು ನಡೆಯುತ್ತಿದ್ದ ಆ ಕಾಲದಲ್ಲಿಯೂ ಸುಭದ್ರವಾಗಿದ್ದ ನಮ್ಮ ಅರ್ಥವ್ಯವಸ್ಥೆ ಸುಮಾರು 10 ಕೋಟಿಯಷ್ಟಿದ್ದ ಅಂದಿನ ಜನ ಸಂಖ್ಯೆಯ ಅಗತ್ಯಗಳನ್ನು ಪೂರೈಸಿ, ದೇಶದ ಒಳ ಮಾರುಕಟ್ಟೆಗೆ, ಬೆಳೆಯುತ್ತಿದ್ದ ವಿದೇಶಿ ಮಾರುಕಟ್ಟೆಗೆ , ಮೊಘಲ್ ಸಾಮ್ರಾಜ್ಯದ ಸೈನ್ಯಕ್ಕೆ ಹಾಗೂ ಬೃಹತ್ ಸಾರ್ವಜನಿಕ ಕಟ್ಟಡ ಮತ್ತಿತರ ನಿರ್ಮಾಣ ಕಾರ್ಯಗಳಿಗೆ ವಿವಿಧ ಸಿದ್ಧವಸ್ತುಗಳನ್ನು ಒದಗಿಸುತ್ತಿದ್ದು ಅಂತಹ ಅರ್ಥ ವ್ಯವಸ್ಥೆಯನ್ನು ನಿರ್ಬಲವಾಗಿತ್ತೆಂದೋ ಶಿಥಿಲವಾಗಿತ್ತೆಂದೋ ಹೆಸರಿಸುವುದು ಅಪಚಾರವೇವಾಗುತ್ತದೆ ಅಲ್ವಾ!?
ಈ ಅರ್ಥ ವ್ಯವಸ್ಥೆಯ ಪ್ರಮುಖ ಲಕ್ಷಣಗಳನ್ನು ಪ್ರತಿಯೊಬ್ಬ ಭಾರತೀಯನೂ ತಿಳಿದುಕೊಳ್ಳುವುದು ಅಗತ್ಯ. ಆದರೆ ಇಲ್ಲಿ ನಾ ಹೇಳಿರುವುದು ಅತ್ಯಂತ ಸ್ಥೂಲ ರೂಪ. ದೂರದಿಂದ ಬೆಟ್ಟ ತೋರಿಸಿದ ಹಾಗೆ. ಈ ವಿಷಯಗಳನ್ನು ಬಹಳ ಕೂಲಂಕುಶವಾಗಿ ವಿವರಿಸಲು ವಿಧ್ವಾಂಸರೇ ಹಿಂಜರಿಯುತ್ತಿದ್ದಾರೆ ಅಂದರೆ ಅವರಿಗೂ ನಮ್ಮ ಭಾರತದ ಸಂಪತ್ತನ್ನು ಅರಿಯಲು ಇಂದಿಗೂ ಕಷ್ಟ ಸಾಧ್ಯವಾಗಿದೆ.
ಇದು ನಮ್ಮ ಭಾರತ ಬಹಳ ಪುರಾತನ ಕಾಲದಿಂದ ಪರಕೀಯ ದಾಳಿ ಆಕ್ರಮಣಗಳನ್ನು ಎದುರಿಸಿದ ದೇಶ. ಆದರೆ ಅಮೇರಿಕಾದ ಮೆಕ್ಸಿಕೋ, ಪೆರುಗಳಂತೆ ತಳ್ಳಿದರೆ ಬೀಳುವಂತಹ ದುಃಸ್ಥಿತಿಯಲ್ಲಿರಲಿಲ್ಲ 8-10 ಶತಮಾನಗಳ ಕಾಲ ಅರಬರ, ತುರ್ಕರ, ಅಫ್ಘ್ನ್ನರ ದಾಳಿಗಳನ್ನು ಅನುಭವಿಸಿ ಒಂದೊಂದರ ಪರಿಣಾಮವಾಗಿಯನ್ನು ಒಂದೊಂದು ಹೊಸ ಸಮತೋಲನವನ್ನು ಸಾಧಿಸಿಕೊಂಡ ಹೆಮ್ಮೆ ಇದ್ದರೆ ಅದು ನಮ್ಮ ಭಾರತದ್ದು ಮಾತ್ರಾ.
ಹೀಗೆ ಒಂದೊಂದು ವಿಷಯ ವೈವಿಧ್ಯವನ್ನು ಹೋಲಿಸುತ್ತಾ ವಿಮರ್ಶಿಸುತ್ತಾ ಸಾಗಿದರೆ ನಂಬಲಾರದ ಅದೆಷ್ಟೋ ಸತ್ಯಗಳು ಕಣ್ಮುಂದೆ ಮತ್ತೊಂದು ಇತಿಹಾಸ ಸೃಷ್ಟಿಸುತ್ತಾ ಸಾಗುತ್ತವೆ. ಈಗ ಹೇಳಿ ನಾವು ಪುಣ್ಯಾತ್ಮರಲ್ಲವೇ. ಮತ್ತೆ ಎಲ್ಲರಿಗೂ ಎದೆತಟ್ಟಿ ಕೂಗಿ ಹೇಳಿ ಇದು “ನಮ್ಮ ಭಾರತ”...